ಕರ್ನಾಟಕಕ್ಕೆ ಹೊಸ 2 ರೈಲು ಮಾರ್ಗ ಘೋಷಿಸಿದ ವಿ ಸೋಮಣ್ಣ ಯಾರಿಗೆಲ್ಲ ಅನುಕೂಲ!

Bhima Samskruthi
By -
0
ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಕರ್ನಾಟಕಕ್ಕೆ ಎರಡು ಹೊಸ ರೈಲು ಮಾರ್ಗಗಳನ್ನು ಘೋಷಿಸಿದ್ದಾರೆ. ಆಲಮಟ್ಟಿ-ಯಾದಗಿರಿ ಮತ್ತು ಭದ್ರಾವತಿ-ಚಿಕ್ಕಜಾಜೂರು ಮಾರ್ಗಗಳ ಸಮೀಕ್ಷೆಗೆ ಅನುಮೋದನೆ ನೀಡಲಾಗಿದ್ದು, ಇದರಿಂದಾಗಿ ಮಧ್ಯ ಹಾಗೂ ಉತ್ತರ ಕರ್ನಾಟಕದ ಆರು ಜಿಲ್ಲೆಗಳಿಗೆ ಅನುಕೂಲವಾಗಲಿದೆ. ಈ ಯೋಜನೆಗೆ 5.87 ಕೋಟಿ ರೂ. ಮೀಸಲಿಡಲಾಗಿದೆ, ಇದು ಸಂಪರ್ಕ ಸುಧಾರಣೆ ಮತ್ತು ಪ್ರಾದೇಶಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ.
ಬೆಂಗಳೂರು: ಕರ್ನಾಟಕ ಜನರಿಗೆ ರೈಲ್ವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ಗುಡ್‌ನ್ಯೂಸ್‌ ನೀಡಿದ್ದಾರೆ. ಹೊಸ 2 ಮಾರ್ಗ ಆರಂಭದ ಬಗ್ಗೆ ಘೋಷಣೆ ಮಾಡಿದ್ದಾರೆ. ಈ ಮಾರ್ಗದಿಂದ ಮಧ್ಯ ಕರ್ನಾಟಕದ 3 ಜಿಲ್ಲೆಗಳಿಗೆ, ಉತ್ತರ ಕರ್ನಾಟಕದ ಮೂರು ಜಿಲ್ಲೆಗಳಿಗೆ ಸೇರಿ ಒಟ್ಟು ರಾಜ್ಯದ ಆರು ಜಿಲ್ಲೆಗಳಿಗೆ ಅನುಕೂಲವಾಗಲಿದೆ.

ಒಂದು ಮಾರ್ಗ ಉತ್ತರ ಕರ್ನಾಟಕಕ್ಕೆ ಸಂಬಂಧಿಸಿದ ಆಲಮಟ್ಟಿ - ಯಾದಗಿರಿ, ಮತ್ತೊಂದು ಮಾರ್ಗ ಅರೆ ಮಲೆನಾಡಿಗೆ ಸಂಬಂಧಿಸಿದ ಭದ್ರಾವತಿ - ಚಿಕ್ಕಜಾಜೂರ್ ನಡುವೆ ಚನ್ನಗಿರಿ ಮೂಲಕ. ಇನ್ನು ಈ ಎರಡು ರೈಲು ಮಾರ್ಗದಿಂದ ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ಬಾಗಲಕೋಟೆ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಯ ಜನರಿಗೆ ಅನುಕೂಲವಾಗಲಿದೆ.
ಈ ಬಗ್ಗೆ ಕೇಂದ್ರ ಸಚಿವ ಸ್ವತಃ ವಿ ಸೋಮಣ್ಣ ಟ್ವೀಟ್‌ ಮಾಡಿದ್ದು, " ಕರ್ನಾಟಕಕ್ಕೆ ಒಳ್ಳೆಯ ಸುದ್ದಿ. ನಮ್ಮ ರಾಜ್ಯದ ಹೆಚ್ಚುತ್ತಿರುವ ಅಗತ್ಯಗಳನ್ನು ಗುರುತಿಸಿ, ಎರಡು ಹೊಸ ರೈಲು ಮಾರ್ಗಗಳಿಗೆ ಅಂತಿಮ ಸ್ಥಳ ಸಮೀಕ್ಷೆಗಳನ್ನು ಅನುಮೋದಿಸಲಾಗಿದೆ " ಎಂದು ತಿಳಿಸಿದ್ದಾರೆ. ಸುಧಾರಿತ ಸಂಪರ್ಕ ಮತ್ತು ವೇಗವರ್ಧಿತ ಪ್ರಾದೇಶಿಕ ಅಭಿವೃದ್ಧಿಯತ್ತ ಇದು ಒಂದು ಪ್ರಮುಖ ಹೆಜ್ಜೆಯಾಗಿದೆ ಎಂದಿರವ ವಿ ಸೋಮಣ್ಣ ಅವರು ಪ್ರಧಾನಿ ಮೋದಿ ಹಾಗೂ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರ ಬೆಂಬಲಕ್ಕೆ ಧನ್ಯವಾದ ಅರ್ಪಿಸಿದ್ದಾರೆ. 
Tags:

Post a Comment

0Comments

Post a Comment (0)