30ಸಾವಿರಾ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ…

Bhima Samskruthi
By -
0
ಸರ್ಕಾರಿ ಕಾಮಗಾರಿಗಳ ಹಣ ಮಂಜೂರು ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಸೊರಬ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಆಫೀಸರ್ ಪರಶುರಾಮ್ ಎಚ್. ನಾಗರಾಳ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಸೊರಬ ತಾಲ್ಲೂಕಿನ ಹಸವಿ ಗ್ರಾಮದ ನಿವಾಸಿ ಮತ್ತು ಪಿಡಬ್ಲ್ಯೂಡಿ ಗುತ್ತಿಗೆದಾರ ಲಿಂಗರಾಜ ಶಿವಪ್ಪ ಉಳ್ಳಾಗಡ್ಡಿ ನೀಡಿದ ದೂರಿನ ಆಧಾರದ ಮೇಲೆ ಲೋಕಾಯುಕ್ತರು ಕಾರ್ಯಾಚರಣೆ ನಡೆಸಿದ್ದಾರೆ. ಲಿಂಗರಾಜ ಉಳ್ಳಾಗಡ್ಡಿ ಅವರು ಸೊರಬ ತಾಲ್ಲೂಕಿನ ಚೀಲನೂರು ಮತ್ತು ಕಣ್ಣೂರು ಗ್ರಾಮಗಳ ರಸ್ತೆ ಡಾಂಬರೀಕರಣ, ರಸ್ತೆ ಅಭಿವೃದ್ಧಿ ಕಾಮಗಾರಿ ಹಾಗೂ ಪಿಎಂಶ್ರೀ ಯೋಜನೆಯಡಿ ಎಣ್ಣೆಕೊಪ್ಪ ಗ್ರಾಮದ ಶಾಲೆ ದುರಸ್ತಿ/ಅಭಿವೃದ್ಧಿ ಸೇರಿದಂತೆ ಒಟ್ಟು 77,59,437/- ರೂಪಾಯಿಗಳ ಕಾಮಗಾರಿಗಳನ್ನು ಪೂರ್ಣಗೊಳಿಸಿದ್ದರು.

ಈ ಕಾಮಗಾರಿಗಳ ಹಣ ಮಂಜೂರು ಮಾಡಲು ಸೆಕ್ಷನ್ ಆಫೀಸರ್ ಪರಶುರಾಮ್ ಎಚ್. ನಾಗರಾಳ ಅವರು ಶೇ. 3ರಷ್ಟು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈಗಾಗಲೇ 1,63,000/- ರೂಪಾಯಿಗಳನ್ನು ಪಡೆದುಕೊಂಡಿದ್ದ ಪರಶುರಾಮ್, ಹೆಚ್ಚುವರಿಯಾಗಿ 70,000/- ರೂಪಾಯಿಗಳಿಗೆ ಬೇಡಿಕೆ ಇಟ್ಟಿದ್ದರು. ಈ ಕುರಿತು ಲಿಂಗರಾಜ ಉಳ್ಳಾಗಡ್ಡಿ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.
Tags:

Post a Comment

0Comments

Post a Comment (0)