ಕುಂಟೋಜಿ ದೇವಸ್ಥಾನದ ವತಿಯಿಂದ ನೂತನ ಕಾನಿಪ ಪದಾಧಿಕಾರಿಗಳಿಗೆ ಸನ್ಮಾನ
ಮುದ್ದೇಬಿಹಾಳ:
ಇತ್ತೀಚೆಗೆ ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ ನೂತನ ಪದಾಧಿಕಾರಿಗಳಿಗೆ ತಾಲೂಕಿನ ಕುಂಟೋಜಿ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನ ಕಮಿಟಿಯ ವತಿಯಿಂದ ಸೋಮವಾರ ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಕಾನಿಪ ಸಂಘದ ನೂತನ ಅಧ್ಯಕ್ಷರಾದ ಡಿ.ಜಿ. ವಡವಡಗಿ, ಉಪಾಧ್ಯಕ್ಷರಾದ ಬಸವರಾಜ ಹುಲಗಣ್ಣಿ ಹಾಗೂ ಜಿ.ಎನ್. ಬೀರಗೊಂಡ (ಮುತ್ತು), ಪ್ರಧಾನ ಕಾರ್ಯದರ್ಶಿ ಎಚ್.ಆರ್. ಬಾಗವಾನ, ಕಾರ್ಯದರ್ಶಿ ಲಾಡ್ಲೆಮಶ್ಯಾಕ್ ನಧಾಪ್ ಹಾಗೂ ವರದಿಗಾರರಾದ ಸಾಗರ ಉಕ್ಕಲಿ ಮತ್ತು ಮುತ್ತಣ್ಣ ಒಡ್ಡೋಡ್ಡಗಿ ಅವರಿಗೆ ಸನ್ಮಾನಿಸಲಾಯಿತು.
ಗ್ರಾಮಸ್ಥರಾದ ಬಿ.ಎಸ್. ಹೂಗಾರ (ಹೂಗಾರ ಸಮಾಜದ ಜಿಲ್ಲಾಧ್ಯಕ್ಷ) ಮಾತನಾಡಿ, ಸಮಾಜದಲ್ಲಿ ಉತ್ತಮ ಪತ್ರಿಕಾ ಮಾಧ್ಯಮದ ಅವಶ್ಯಕತೆ ಅತ್ಯಂತ ಮಹತ್ವದ್ದಾಗಿದೆ. ಸರ್ಕಾರದ ಕಾರ್ಯಚಟುವಟಿಕೆಗಳು ಹಾಗೂ ಸಾರ್ವಜನಿಕರ ಕುಂದುಕೊರತೆಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿ ಪತ್ರಕರ್ತರ ಮೇಲಿದೆ ಎಂದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಕಾನಿಪ ಸಂಘದ ತಾಲ್ಲೂಕು ಅಧ್ಯಕ್ಷ ಡಿ.ಜಿ. ವಡವಡಗಿ ಅವರು, ಪತ್ರಿಕಾ ಮಾಧ್ಯಮವು ಸರ್ಕಾರ ಮತ್ತು ಸಾರ್ವಜನಿಕರ ನಡುವಿನ ಸೇತುವೆಯಾಗಿದೆ. ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಹಾಗೂ ಸಾರ್ವಜನಿಕರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರಲು ಪತ್ರಿಕೆ ಅವಶ್ಯಕವಾಗಿದೆ ಎಂದು ಹೇಳಿದರು.
ಪ್ರಧಾನ ಕಾರ್ಯದರ್ಶಿ ಎಚ್.ಆರ್. ಬಾಗವಾನ ಅವರು, ಸ್ವಾತಂತ್ರ್ಯಪೂರ್ವ ಕಾಲದಲ್ಲಿಯೂ ಪತ್ರಕರ್ತರು ಹೇಗೆ ಸಮಾಜಮುಖಿ ಸೇವೆ ಸಲ್ಲಿಸಿದ್ದರು ಎಂಬುದನ್ನು ಸವಿಸ್ತಾರವಾಗಿ ವಿವರಿಸಿದರು. ಮಾಜಿ ಸೈನಿಕ ನಾಗಲಿಂಗಯ್ಯ ಮಠ ಅವರು ನೂತನ ಪದಾಧಿಕಾರಿಗಳಿಗೆ ಶುಭಾಶಯಗಳನ್ನು ಕೋರಿದರು.
ಕಾರ್ಯಕ್ರಮದಲ್ಲಿ ಬಸವೇಶ್ವರ ದೇವಸ್ಥಾನದ ಜಾತ್ರಾ ಕಮಿಟಿ ಅಧ್ಯಕ್ಷ ಗುರುಲಿಂಗಪ್ಪ ಸುಲ್ಲಳ್ಳಿ, ಸಂಗಮೇಶ ಮಠ, ಸಂಗಮೇಶ ಕುಂಬಾರ, ಅಡತ್ ವ್ಯಾಪಾರಿಗಳು, ರಾಮಣ್ಣ ಹುಲಗಣ್ಣಿ, ಗುರುಪಾದಪ್ಪ ಹೆಬ್ಬಾಳ, ಈರಪ್ಪ ಬಿರಾದಾರ, ಜಗದೀಶ ಪಲ್ಲೆದ, ಸಂಗಮೇಶ ಯರಝರಿ, ಶಣ್ಮುಖಯ್ಯ ಹಿರೇಮಠ, ಆನಂದ ಕಾಟಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
---